September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

ಪಡಂಗಡಿ: ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಹಾಮದ ಬಾವ ಸವಿ ನೆನಪಿಗಾಗಿ, ದಿ ಸುಬ್ರಹ್ಮಣ್ಯ ಪ್ರಸಾದ್ ವೇದಿಕೆಯಲ್ಲಿ ಪಡಂಗಡಿ ಪ್ರೀಮಿಯರ್ ಲೀಗ್ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಜ 31, ಫೆ 1 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕ್ರಿಕೆಟ್ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ರ್‍ಯಾಶ್ ತಂಡದಲ್ಲಿ ಮೈದಾನಕ್ಕಿಳಿದು ಕ್ರಿಕೆಟ್ ಆಡಲಿದ್ದಾರೆ. ಈಗಾಗಲೇ ತಂಡದ ಆಟಗಾರರಿಗೆ ಶಾಸಕರು ಜೊತೆಯಾಗಿ ಕ್ರಿಕೆಟ್ ಆಡುತ್ತಿರುವುದು ಖುಷಿ ನೀಡಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ಪಂದ್ಯಾವಳಿಯು ಎರಡು ದಿನಗಳ ಕಾಲ ನಡೆಯಲಿದ್ದು ವಿಶೇಷವಾಗಿ ಪಡಂಗಡಿಯ 40ವರ್ಷ ಮೇಲ್ಪಟ್ಟ ಮಾಜಿ ಆಟಗಾರರಿಗೂ ಲೆಜೆಂಡ್ಸ್ ಟ್ರೋಫಿ ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಂತೋಷ್ ಕುಮಾರ್ ಜೈ‌ನ್ ಪಡಂಗಡಿ, ವಿತೇಶ್ ಕುಮಾರ್ ಜೈನ್, ಆಸಿದ್, ಸುಕೇಶ್ ಪೂಜಾರಿ, ಅಶ್ವಿತ್ ಮೂಲ್ಯ, ಪ್ರಶಾಂತ್ ಮೂಲ್ಯ, ಉಮೇಶ್ ಪೂಜಾರಿ, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!