July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

ಬೆಳ್ತಂಗಡಿ: ಜ.26ರಂದು ಬೆಂಗಳೂರಿನ ಮಾಣಿಕ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಗಣರಾಜ್ಯೋತ್ಸವ ಪಥಸಂಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರ ತಂಡಕ್ಕೆ ಗುರುವಾಯನಕೆರೆಯ ಟಿ. ಸುದರ್ಶನ್ ನಾಯಕ್ ಅವರು ಆಯ್ಕೆಯಾಗಿದ್ದು ಪ್ರಸ್ತುತ ಯುವ ತರಬೇತಿ ಕೇಂದ್ರ, ಕುಂಬಳಗೂಡು, ಬೆಂಗಳೂರುನಲ್ಲಿ ನಡೆಯುವ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕರಾಗಿದ್ದಾರೆ. ಇವರು ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಈಗಾಗಲೇ ಕಾರವಾರದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರ, ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲೂ ಪಾಲ್ಗೊಂಡಿದ್ದಾರೆ. ಅಲ್ಲದೆ, ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರ ಹಾಗೂ ಕೇರಳದಲ್ಲಿ ನಡೆದ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರದಲ್ಲೂ ಭಾಗವಹಿಸಿ ಉತ್ತಮ ಅನುಭವ ಪಡೆದಿದ್ದಾರೆ.

Related posts

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya
error: Content is protected !!