September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

ಉಜಿರೆ : ಫೆಬ್ರವರಿ 05 ರಿಂದ 12ರವರೆಗೆ ದೆಹಲಿಯಲ್ಲಿ ನಡೆಯಲಿರುವ ಪುರುಷರ ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಪದವಿ ಕೇಂದ್ರದ ವಿದ್ಯಾರ್ಥಿಗಳಾದ ಚಿಂತನ್ ಬಿ ಸಿ ಮತ್ತು ಪುನೀತ್ ಕುಮಾರ್ ಆಯ್ಕೆಗೊಂಡಿದ್ದಾರೆ.

ಮಡಿಕೇರಿಯ ಗೋಣಿಕೊಪ್ಪಲು ಮೂಲದ ಚೆನ್ನಪ್ಪ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರನಾದ ಪುನೀತ್ ಹಾಗು ಮೂಡುಬಿದಿರೆ ಎಡಪದವಿನ ಜನಾರ್ದನ ಗೌಡ ಮತ್ತು ವಿಜಯ ದಂಪತಿಗಳ ಪುನೀತ್ ಕುಮಾರ್ ಈ ಹಿಂದೆ ತುಮಕೂರಿನ ಸಿದ್ಧಾರ್ಥ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿರುತ್ತಾರೆ. ಜೊತೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.

ಕಾಲೇಜಿನ ಇದೇ ವಿದ್ಯಾರ್ಥಿಗಳು ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ನಡೆದ 43ನೇ ಸೀನಿಯರ್ ನ್ಯಾಷನಲ್ ನೆಟ್ ಬಾಲ್ ಪಂದ್ಯಾವಳಿ ಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ತಮಿಳುನಾಡಿನಲ್ಲಿ ನಡೆದ ಸೀನಿಯರ್ ಸೌತ್ ನ್ಯಾಷನಲ್ ನೆಟ್ ಬಾಲ್ ಪಂದ್ಯಾಕೂಟದಲ್ಲೂ ಭಾಗವಹಿಸಿರುತ್ತಾರೆ.

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಅಂತಿಮ ಆಯ್ಕೆ ಪ್ರಕ್ರಿಯೆ ಫೆಬ್ರವರಿಯ ಮೊದಲ ವಾರದಲ್ಲಿ ನಡೆಯಲಿದ್ದು, ರಾಷ್ಟ್ರ ಮಟ್ಟದದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕ್ರೀಡಾ ಪಟುಗಳಿಗೆ ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು
ನೀಡಿರುತ್ತಾರೆ.

Related posts

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!