July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

ಪಡಂಗಡಿ: ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಹಾಮದ ಬಾವ ಸವಿ ನೆನಪಿಗಾಗಿ, ದಿ ಸುಬ್ರಹ್ಮಣ್ಯ ಪ್ರಸಾದ್ ವೇದಿಕೆಯಲ್ಲಿ ಪಡಂಗಡಿ ಪ್ರೀಮಿಯರ್ ಲೀಗ್ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಜ 31, ಫೆ 1 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕ್ರಿಕೆಟ್ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ರ್‍ಯಾಶ್ ತಂಡದಲ್ಲಿ ಮೈದಾನಕ್ಕಿಳಿದು ಕ್ರಿಕೆಟ್ ಆಡಲಿದ್ದಾರೆ. ಈಗಾಗಲೇ ತಂಡದ ಆಟಗಾರರಿಗೆ ಶಾಸಕರು ಜೊತೆಯಾಗಿ ಕ್ರಿಕೆಟ್ ಆಡುತ್ತಿರುವುದು ಖುಷಿ ನೀಡಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ಪಂದ್ಯಾವಳಿಯು ಎರಡು ದಿನಗಳ ಕಾಲ ನಡೆಯಲಿದ್ದು ವಿಶೇಷವಾಗಿ ಪಡಂಗಡಿಯ 40ವರ್ಷ ಮೇಲ್ಪಟ್ಟ ಮಾಜಿ ಆಟಗಾರರಿಗೂ ಲೆಜೆಂಡ್ಸ್ ಟ್ರೋಫಿ ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಂತೋಷ್ ಕುಮಾರ್ ಜೈ‌ನ್ ಪಡಂಗಡಿ, ವಿತೇಶ್ ಕುಮಾರ್ ಜೈನ್, ಆಸಿದ್, ಸುಕೇಶ್ ಪೂಜಾರಿ, ಅಶ್ವಿತ್ ಮೂಲ್ಯ, ಪ್ರಶಾಂತ್ ಮೂಲ್ಯ, ಉಮೇಶ್ ಪೂಜಾರಿ, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!