July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

ಬೆಳ್ತಂಗಡಿ: ಹಿಂದೂ ಕಮಿಟಿ ಹರ್ಜ್ಲಿಯಾ ಇಸ್ರೇಲ್ ಇದರ ವತಿಯಿಂದ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವವು ಜ.17 ರಂದು ಹರ್ಜ್ಲಿಯಾದಲ್ಲಿ ಜರುಗಿತು.

ಅರ್ಚಕರಾದ ರಾಜೇಶ್ ಸಾಲಿಯಾನ್ ಹಾಗೂ ಗಣೇಶ್ ಆಚಾರ್ಯರವರ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳು ಜರುಗಿದವು. ಭಜನಾ ಕಾರ್ಯಕ್ರಮದ ಮೂಲಕ ಅಯ್ಯಪ್ಪ ಸ್ವಾಮಿಯನ್ನು ಭಕ್ತಿಯಿಂದ ಸ್ತುತಿಸಲಾಯಿತು.

ಹಿರಿಯ ಭಜಕರಾದ ಸುಧೀರ್ ಕೋಟ್ಯಾನ್ ರವರು ನೆರೆದಿದ್ದ ಭಕ್ತಸಮೂಹದ ಪರವಾಗಿ ಸರ್ವಜನಹಿತ ಹಾಗೂ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಶಶಿ ಕುಂದಾಪುರರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಕಮಿಟಿ ಹರ್ಜ್ಲಿಯಾ ಇದರ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya
error: Content is protected !!