ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೌಶಲ್ಯ ಭಾರತ್ ಯೋಜನೆ, ಕರ್ನಾಟಕ ರಾಜ್ಯ ಸರಕಾರದ ಅನುಷ್ಠಾನದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಬೆಂಗಳೂರು ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆಯು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

10 ದಿನದ ತರಬೇತಿಯನ್ನು ಪೂರೈಸಿದ ಉಜಿರೆ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಉಭಯ ಗ್ರಾಮದ ಪಂಚಾಯತ್ ಅಧ್ಯಕ್ಷರು ಕಿಟ್ ಸರ್ಟಿಫಿಕೇಟ್ ವಿತರಿಸಿ ಶುಭ ಹಾರೈಸಿದರು. ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಶಕ್ತರಾಗಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕಾರ್ಯದರ್ಶಿ ಸರೋಜ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.
ಸೃಷ್ಟಿ ಇನ್ಫೋಟೆಕ್ ಕುಂದಾಪುರ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿ ವಿನುತ ರಜತ್ ಗೌಡ ಉಜಿರೆ ಕಾರ್ಮಿಕರಿಗೆ ತರಬೇತಿ ನೀಡಿದ್ದರು. ಕಲ್ಮಂಜ ಗ್ರಾಮದ ಕಟ್ಟಡ ಕಾರ್ಮಿಕರಾದ ಐತಪ್ಪ ನಲಿಕೆ ಪೂಜಾ, ಉಜಿರೆ ಗ್ರಾಮದ ಸಂದೀಪ್ 10 ದಿನದ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.
ಸಂಪನ್ಮೂಲ ವ್ಯಕ್ತಿ ಸ್ವಾಗತಿಸಿ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!