25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya
error: Content is protected !!