30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!