ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನ ಮಂದಿರದ ಸಭಾಂಗಣದಲ್ಲಿ ಜ. 18ರಂದು ನಡೆಯಿತು.

ತುಂಬೆದಲೆಕ್ಕಿ ಭಜನ ಮಂದಿರದ ಗೌರವ ಸಲಹೆಗಾರರಾಗಿರುವ ಲಕ್ಷ್ಮೀನಾರಾಯಣ ಆಚಾರ್ಯ ಸಂಗಬೆಟ್ಟು ಅವರು ನುಡಿನಮನಗೈದು, ಮಂಜಪ್ಪ ದೇವಾಡಿಗರ ಗುಣಗಾನ ಮಾಡಿದರು. ಪ್ರಾಧ್ಯಾಪಕ ಗುಣಪ್ರಸಾದ್ ಕಾರಂದೂರು ಶ್ರದ್ಧಾಂಜಲಿ ಅರ್ಪಿಸಿ, ಸೌಮ್ಯ ಸ್ವಭಾವದ ಮಂಜಪ್ಪ ದೇವಾಡಿಗರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಭಜನೆಯನ್ನೇ ಜೀವನವನ್ನಾಗಿಸಿದ ಅವರು ಮಕ್ಕಳಿಗೆ ಸ್ಪೂರ್ತಿದಾಯಕರಾಗಿದ್ದರು, ಅವರ ನಿಧನ ತುಂಬೆದಲೆಕ್ಕಿ ಭಜನ ಮಂಡಳಿಗೆ ತುಂಬಲಾಗದ ನಷ್ಟ ಎಂದರು.

ವೇಣೂರಿನ ಉದ್ಯಮಿ ಹಿರಿಯರಾದ ಕೆ. ಭಾಸ್ಕರ ಪೈ, ಕೆ. ವಿಜಯ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುಗಳಾದ ಶಾಲಿನಿ, ವೀಣಾ, ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಲಿಂಗಪ್ಪ ದೇವಾಡಿಗ ಗೋಳಿದಡ್ಕ ಸೇರಿದಂತೆ ಮಂಜಪ್ಪ ದೇವಾಡಿಗರ ಕುಟುಂಬಿಕರು, ಹಿತೈಷಿಗಳು, ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕರ ಪರವಾಗಿ ಜಯಂಶಕರ ಹೆಗ್ಡೆ ಅವರು ಗುಣಗಾನಗೈದರು. ಹರೀಶ್ ಕುಮಾರ್ ಪೊಕ್ಕಿ ಪ್ರಸ್ತಾವಣೆಗೈದು, ಸಭೆಯನ್ನು ನಿರ್ವಹಿಸಿದರು.

Related posts

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya
error: Content is protected !!