July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು ಕುರಿತು ಸಮಗ್ರ ತನಿಖೆ ನಡೆಸಿ, ನ್ಯಾಯ ದೊರಕುವಂತೆ ಜ.20ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದ ಪ್ರದಾನ ಅರ್ಚಕ ವೇ.ಮೂ.‌ರಾಘವೇಂದ್ರ ಅಸ್ರಣ್ಣ ಅವರ ಉಪಸ್ಥಿತಿಯಲ್ಲಿ 108 ಬಾರಿ ಶ್ರೀ ದುರ್ಗಾದೇವಿ ನಾಮ ಜಪ ಮಾಡಿ, ಅಪರಾಧಿಗಳು ಬೇಗ ಪತ್ತೆಯಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ , ವಿಹಿಪಂ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಜ. 14ರ ಮಕರ ಸಂಕ್ರಾತಿಯ ದಿನ ಬೆಳಗ್ಗೆ ಧನು ಪೂಜೆಗೆಂದು ಹೊರಟಿದ್ದ ಸಂದರ್ಭದಲ್ಲಿ ಮನೆಯಿಂದ ಕೂಗಳತೆಯ ದೂರದ ಕೆರೆಯಲ್ಲಿ ಅನುಮಾನಸ್ಪದವಾಗಿ ಶವ ಸಿಕ್ಕಿರುತ್ತದೆ.

ಈಗಾಗಲೇ ದ.ಕ. ಜಿಲ್ಲೆ ವರಿಷ್ಠಾಧಿಕಾರಿ ದಕ್ಷ ಅಧಿಕಾರಿ ಅರುಣ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆ ಹಾಗೂ ತಾಲೂಕಿನ ದಕ್ಷ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಅಮಾಯಕ ಬಾಲಕನ ಅಸಹಜ ಸಾವಿನಿಂದ ಮನೆಯವರು ಹಾಗೂ ಊರವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಪ್ರಕರಣಕ್ಕೆ ಅಂತ್ಯ ಹಾಡಿ ಮನೆಯವರಿಗೆ ನ್ಯಾಯ ಸಿಗುವಂತೆ ಆಗ್ರಹಿಸಿದರು.

ವಿಹಿಂಪ ಜಿಲ್ಲಾ ಸಹಸಂಯೋಜಕ ದಿನೇಶ್ ಚಾರ್ಮಾಡಿ, ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಹ ಕಾರ್ಯದರ್ಶಿ ಸತೀಶ್ ಮರಕಡ, ಬಜರಂಗದಳ ಸಂಯೋಜಕ
ಪ್ರಭಾಕರ ಮುದಲಡ್ಕ, ಸಹ ಸಂಯೋಜಕ ಮೋಹನ್ ಕಂಚೇಲು ನಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಚಂದ್ರಕಾಂತ್ ನಿಡ್ಡಾಜೆ, ರಾಜೇಶ್ ಪೆಂರ್ಬುಡ, ದಯರಾಜ್ ಹೀರ್ಯ, ಕರುಣಾಕರ ಕೊರಂಜ, ಸದಾನಂದ ಶೆಟ್ಟಿ, ಗಣೇಶ್ ನಾಳ, ರಂಜನ್ ಮುದ್ದುಂಜ, ಗಣೇಶ್ ರಾವ್ ಗೇರುಕಟ್ಟೆ, ಪುರಂದರ ಗೇರುಕಟ್ಟೆ, ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಮನೀಶ್ ಮಚ್ಚಿನ, ಸುಕೇಶ್, ದಾಮೋದರ್, ಗಿರೀಶ್ ಗೇರುಕಟ್ಟೆ, ಭುವನೇಶ್ ಗೇರುಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya
error: Content is protected !!