July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು. ಶ್ರವಣ ದೋಷವುಳ್ಳ ಮಕ್ಕಳ ಶ್ರವಣ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅಗತ್ಯವಾದ ಶ್ರವಣ ಸಾಧನ ಪ್ರೋಗ್ರಾಮಿಂಗ್ ಹಾಗೂ ಫಿಟ್ಟಿಂಗ್ ಗಳನ್ನು ಒದಗಿಸುವುದು ಹಾಗೂ ಶ್ರವಣದೋಷವಿರುವ ಮಕ್ಕಳನ್ನು ಮುಂಚಿತವಾಗಿ ಗುರುತಿಸಿ ಸೂಕ್ತ ಹಸ್ತಕ್ಷೇಪದ ಮೂಲಕ ಮಕ್ಕಳ ಸಮಸ್ಯೆಯನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಒಟ್ಟು 05 ಮಕ್ಕಳಿಗೆ ಶ್ರವಣ ಮೌಲ್ಯಮಾಪನವನ್ನು ನಡೆಸಿ, ಶ್ರವಣ ದೋಷವಿರುವ 03 ವಿಶೇಷ ಚೇತನ ಮಕ್ಕಳಿಗೆ ದಾನಿಯೊಬ್ಬರಿಂದ ನೀಡಲ್ಪಟ್ಟ ಶ್ರವಣ ಸಾಧನಗಳನ್ನು ಅಳವಡಿಸಲಾಯಿತು.
ಶಾಲಾ ಶ್ರವಣಶಾಸ್ತ್ರಜ್ಞ ಮತ್ತು ಸ್ಪೀಚ್ ಥೆರಪಿಸ್ಟ್ ರಕ್ಷಾ ಅರುಣ್ ಪೂಜಾರಿ ಹಾಗೂ ಎಮ್.ವಿ.ಶೆಟ್ಟಿ ಕಾಲೇಜು ಮಂಗಳೂರು ಇಲ್ಲಿನ ಮೂವರು ಇಂಟರ್ನ್ಸ್ಗಳಾದ ಕಾವೇರಿ ಮತ್ತು ಶಿರ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya
error: Content is protected !!