23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

ನೆರಿಯ : ಇಲ್ಲಿಯ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು , ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ ಅವರು ನೆರಿಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ , ಕರ್ನಾಟಕ ಸರ್ಕಾರದ ಭೂ ನ್ಯಾಯ ಮಂಡಳಿ ಮಾಜಿ ಸದಸ್ಯರಾಗಿ , ಮಲೆಕುಡಿಯ ಸಮುದಾಯದ ಹಿರಿಯ ಸದಸ್ಯರಾಗಿ , ಕೊಯ್ಯುರು ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಕಲ್ಯಾಣಿ , ಪುತ್ರರಾದ ಲೀಲಾಧರ , ರಾಘವೇಂದ್ರ , ಸೊಸೆಯಂದಿರು , ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನೀಲಯ್ಯ ಮಲೆಕುಡಿಯರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೆಸ್ಕಾಂ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಮಾಜಿ ಸಚಿವ ಗಂಗಾಧರ ಗೌಡ , ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗೇಶ್ ಗೌಡ , ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ , ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya
error: Content is protected !!