22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನ ವ್ಯಾಪ್ತಿಯ ಸೇವಾಪ್ರತಿನಿಧಿಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಗ್ರಾಮಾಬಿವೃದ್ಧಿ ಯೋಜನೆಯ ಹಿನ್ನಲೆ , ಗ್ರಾಮ ಅಭಿವೃದ್ಧಿ ಯೋಜನೆ ನಡೆದು ಬಂದ ದಾರಿ ಬಗ್ಗೆ ವಿವರಿಸಿದರೂ, ತಂಡಗಳ ಮೇಲ್ದರ್ಜೆಗೆ ಏರಿಸುವಲ್ಲಿ ಸುತ್ತೋಲೆ 64ರ ಎಂಟು ಅಂಶಗಳ ಬಗ್ಗೆ ಮಾಹಿತಿ ಮಾದೇಶ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಸೇವಾ ಪ್ರತಿನಿಧಿಗಳಿಗೆ, ಶ್ರೀ ಕ್ಷೇತ್ರದ ಬಗ್ಗೆ, ಅಂಗ ಸಂಸ್ಥೆಗಳ ಬಗ್ಗೆ, ವಿವರಿಸುತ್ತಾ ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಪೂಜ್ಯರು ಪ್ರಾರಂಭಿಸಿದ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅಂದಿನ ಕಾರ್ಯಕರ್ತರು ಮನೆ ಬೇಟಿ ಮಾಡಿ ಪ್ರತಿಯೊಂದು ಕುಟುಂಬದ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಶ್ರಮ ಪಟ್ಟು ಪ್ರಾಮಾಣಿಕವಾದ ಸೇವೆಯನ್ನು ನೀಡಿದ್ದಾರೆ. ನಾವು ಸದಸ್ಯರ ಸ್ಥಾನ ಮಾನ ವ್ಯಕ್ತಿತ್ವಕ್ಕೆ ಗೌರವವನ್ನು ನೀಡಬೇಕು. ತಾಲೂಕಿನ ಎಷ್ಟೋ ಮನೆಗಳಿಗೆ ಪೂಜ್ಯರು ಖುದ್ದು ಭೇಟಿ ನೀಡಿದ್ದಾರೆ. ನಾವು ಒಬ್ಬ ಒಳ್ಳೆಯ ಮನುಷ್ಯರಾಗಬೇಕು . ಉತ್ತಮ ಕಾರ್ಯಕರ್ತರಾಗಬೇಕು. ನಾವು ಮಾಡುವ ಸೇವೆ ಬೆಳಗುವ ದೀಪಕ್ಕೆ ಎಣ್ಣೆಯನ್ನು ಹಾಕುವ ಕೆಲಸವಾಗಬೇಕು. ಗೆಲ್ಲುವುದು ನಂಬಿಕೆ ಪ್ರೀತಿ ವಿಶ್ವಾಸ, ಪ್ರಾಮಾಣಿಕವಾದ ಸೇವೆ ಮತ್ತು ಗೌರವದ ಸೇವೆಯನ್ನು ನೀಡಿ ಎಂದರು. ಉತ್ತಮ ಗುರಿಯನ್ನು ಇಟ್ಟುಕೊಂಡು ಬೇಟಿ ಮಾಡಿ ಪರಿಶೀಲನಾ ಕ್ರಮ ಉತ್ತಮವಾಗಿದ್ದಲ್ಲಿ ನಮಗೆ ಯಾವುದೇ ರೀತಿಯ ಒತ್ತಡ ಆಗಲು ಸಾಧ್ಯವಿಲ್ಲ ನಾವು ಮಾಡುವ ತಪ್ಪುಗಳೇ ನಮಗೆ ಒತ್ತಡವಾಗುತ್ತದೆ ಎಲ್ಲರನ್ನೂ ಮಾತನಾಡಿಸಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡಿದ ಹೆಚ್ಚು ಹೆಚ್ಚು ಅಧ್ಯಯನದಿಂದ ವಿಶ್ವಾಸ ನಂಬಿಕೆ ಹೆಚ್ಚಾಗುತ್ತದೆ ಎಂದು ಮಾರ್ಗದರ್ಶನ ನೀಡಿದರು.

Related posts

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!