23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನ ವ್ಯಾಪ್ತಿಯ ಸೇವಾಪ್ರತಿನಿಧಿಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಗ್ರಾಮಾಬಿವೃದ್ಧಿ ಯೋಜನೆಯ ಹಿನ್ನಲೆ , ಗ್ರಾಮ ಅಭಿವೃದ್ಧಿ ಯೋಜನೆ ನಡೆದು ಬಂದ ದಾರಿ ಬಗ್ಗೆ ವಿವರಿಸಿದರೂ, ತಂಡಗಳ ಮೇಲ್ದರ್ಜೆಗೆ ಏರಿಸುವಲ್ಲಿ ಸುತ್ತೋಲೆ 64ರ ಎಂಟು ಅಂಶಗಳ ಬಗ್ಗೆ ಮಾಹಿತಿ ಮಾದೇಶ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಸೇವಾ ಪ್ರತಿನಿಧಿಗಳಿಗೆ, ಶ್ರೀ ಕ್ಷೇತ್ರದ ಬಗ್ಗೆ, ಅಂಗ ಸಂಸ್ಥೆಗಳ ಬಗ್ಗೆ, ವಿವರಿಸುತ್ತಾ ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಪೂಜ್ಯರು ಪ್ರಾರಂಭಿಸಿದ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅಂದಿನ ಕಾರ್ಯಕರ್ತರು ಮನೆ ಬೇಟಿ ಮಾಡಿ ಪ್ರತಿಯೊಂದು ಕುಟುಂಬದ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಶ್ರಮ ಪಟ್ಟು ಪ್ರಾಮಾಣಿಕವಾದ ಸೇವೆಯನ್ನು ನೀಡಿದ್ದಾರೆ. ನಾವು ಸದಸ್ಯರ ಸ್ಥಾನ ಮಾನ ವ್ಯಕ್ತಿತ್ವಕ್ಕೆ ಗೌರವವನ್ನು ನೀಡಬೇಕು. ತಾಲೂಕಿನ ಎಷ್ಟೋ ಮನೆಗಳಿಗೆ ಪೂಜ್ಯರು ಖುದ್ದು ಭೇಟಿ ನೀಡಿದ್ದಾರೆ. ನಾವು ಒಬ್ಬ ಒಳ್ಳೆಯ ಮನುಷ್ಯರಾಗಬೇಕು . ಉತ್ತಮ ಕಾರ್ಯಕರ್ತರಾಗಬೇಕು. ನಾವು ಮಾಡುವ ಸೇವೆ ಬೆಳಗುವ ದೀಪಕ್ಕೆ ಎಣ್ಣೆಯನ್ನು ಹಾಕುವ ಕೆಲಸವಾಗಬೇಕು. ಗೆಲ್ಲುವುದು ನಂಬಿಕೆ ಪ್ರೀತಿ ವಿಶ್ವಾಸ, ಪ್ರಾಮಾಣಿಕವಾದ ಸೇವೆ ಮತ್ತು ಗೌರವದ ಸೇವೆಯನ್ನು ನೀಡಿ ಎಂದರು. ಉತ್ತಮ ಗುರಿಯನ್ನು ಇಟ್ಟುಕೊಂಡು ಬೇಟಿ ಮಾಡಿ ಪರಿಶೀಲನಾ ಕ್ರಮ ಉತ್ತಮವಾಗಿದ್ದಲ್ಲಿ ನಮಗೆ ಯಾವುದೇ ರೀತಿಯ ಒತ್ತಡ ಆಗಲು ಸಾಧ್ಯವಿಲ್ಲ ನಾವು ಮಾಡುವ ತಪ್ಪುಗಳೇ ನಮಗೆ ಒತ್ತಡವಾಗುತ್ತದೆ ಎಲ್ಲರನ್ನೂ ಮಾತನಾಡಿಸಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡಿದ ಹೆಚ್ಚು ಹೆಚ್ಚು ಅಧ್ಯಯನದಿಂದ ವಿಶ್ವಾಸ ನಂಬಿಕೆ ಹೆಚ್ಚಾಗುತ್ತದೆ ಎಂದು ಮಾರ್ಗದರ್ಶನ ನೀಡಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya
error: Content is protected !!