September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನ ವ್ಯಾಪ್ತಿಯ ಸೇವಾಪ್ರತಿನಿಧಿಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಗ್ರಾಮಾಬಿವೃದ್ಧಿ ಯೋಜನೆಯ ಹಿನ್ನಲೆ , ಗ್ರಾಮ ಅಭಿವೃದ್ಧಿ ಯೋಜನೆ ನಡೆದು ಬಂದ ದಾರಿ ಬಗ್ಗೆ ವಿವರಿಸಿದರೂ, ತಂಡಗಳ ಮೇಲ್ದರ್ಜೆಗೆ ಏರಿಸುವಲ್ಲಿ ಸುತ್ತೋಲೆ 64ರ ಎಂಟು ಅಂಶಗಳ ಬಗ್ಗೆ ಮಾಹಿತಿ ಮಾದೇಶ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಸೇವಾ ಪ್ರತಿನಿಧಿಗಳಿಗೆ, ಶ್ರೀ ಕ್ಷೇತ್ರದ ಬಗ್ಗೆ, ಅಂಗ ಸಂಸ್ಥೆಗಳ ಬಗ್ಗೆ, ವಿವರಿಸುತ್ತಾ ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಪೂಜ್ಯರು ಪ್ರಾರಂಭಿಸಿದ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅಂದಿನ ಕಾರ್ಯಕರ್ತರು ಮನೆ ಬೇಟಿ ಮಾಡಿ ಪ್ರತಿಯೊಂದು ಕುಟುಂಬದ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಶ್ರಮ ಪಟ್ಟು ಪ್ರಾಮಾಣಿಕವಾದ ಸೇವೆಯನ್ನು ನೀಡಿದ್ದಾರೆ. ನಾವು ಸದಸ್ಯರ ಸ್ಥಾನ ಮಾನ ವ್ಯಕ್ತಿತ್ವಕ್ಕೆ ಗೌರವವನ್ನು ನೀಡಬೇಕು. ತಾಲೂಕಿನ ಎಷ್ಟೋ ಮನೆಗಳಿಗೆ ಪೂಜ್ಯರು ಖುದ್ದು ಭೇಟಿ ನೀಡಿದ್ದಾರೆ. ನಾವು ಒಬ್ಬ ಒಳ್ಳೆಯ ಮನುಷ್ಯರಾಗಬೇಕು . ಉತ್ತಮ ಕಾರ್ಯಕರ್ತರಾಗಬೇಕು. ನಾವು ಮಾಡುವ ಸೇವೆ ಬೆಳಗುವ ದೀಪಕ್ಕೆ ಎಣ್ಣೆಯನ್ನು ಹಾಕುವ ಕೆಲಸವಾಗಬೇಕು. ಗೆಲ್ಲುವುದು ನಂಬಿಕೆ ಪ್ರೀತಿ ವಿಶ್ವಾಸ, ಪ್ರಾಮಾಣಿಕವಾದ ಸೇವೆ ಮತ್ತು ಗೌರವದ ಸೇವೆಯನ್ನು ನೀಡಿ ಎಂದರು. ಉತ್ತಮ ಗುರಿಯನ್ನು ಇಟ್ಟುಕೊಂಡು ಬೇಟಿ ಮಾಡಿ ಪರಿಶೀಲನಾ ಕ್ರಮ ಉತ್ತಮವಾಗಿದ್ದಲ್ಲಿ ನಮಗೆ ಯಾವುದೇ ರೀತಿಯ ಒತ್ತಡ ಆಗಲು ಸಾಧ್ಯವಿಲ್ಲ ನಾವು ಮಾಡುವ ತಪ್ಪುಗಳೇ ನಮಗೆ ಒತ್ತಡವಾಗುತ್ತದೆ ಎಲ್ಲರನ್ನೂ ಮಾತನಾಡಿಸಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡಿದ ಹೆಚ್ಚು ಹೆಚ್ಚು ಅಧ್ಯಯನದಿಂದ ವಿಶ್ವಾಸ ನಂಬಿಕೆ ಹೆಚ್ಚಾಗುತ್ತದೆ ಎಂದು ಮಾರ್ಗದರ್ಶನ ನೀಡಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!