September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಶಾಸಕರು ವಿಶೇಷವಾಗಿ ಶ್ರಮವಹಿಸಿದರು .

ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75ಲಕ್ಷವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ. ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!