25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, “ಇಂದಿನ ಜೀವನದಲ್ಲಿ ಈ ಮೂರು ತರಬೇತಿ ವಿಷಯಗಳು ಅತ್ಯಂತ ಅವಶ್ಯಕವಾಗಿವೆ. ಕಲಿತ ವೃತ್ತಿಯನ್ನು ಆತ್ಮವಿಶ್ವಾಸದಿಂದ ಸ್ವ ಉದ್ಯೋಗವಾಗಿ ಕೈಗೊಂಡು, ಸ್ವಾವಲಂಬಿ ಜೀವನ ನಡೆಸಬೇಕು. ಶ್ರಮ ಮತ್ತು ಶಿಸ್ತಿನಿಂದ ತೊಡಗಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ವಿರೂಪಾಕ್ಷ ಮತ್ತು ದೇವರಾಜ್, ಹಾಗೂ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ರುಡ್ ಸೆಟ್ ಸಂಸ್ಥೆಯಲ್ಲಿ ಪಡೆದ ಕೌಶಲ್ಯಾಧಾರಿತ ತರಬೇತಿ, ಮಾರ್ಗದರ್ಶನ ಹಾಗೂ ಸ್ವ ಉದ್ಯೋಗದತ್ತ ಪಡೆದ ಪ್ರೇರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Related posts

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya
error: Content is protected !!