ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೌಶಲ್ಯ ಭಾರತ್ ಯೋಜನೆ, ಕರ್ನಾಟಕ ರಾಜ್ಯ ಸರಕಾರದ ಅನುಷ್ಠಾನದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಬೆಂಗಳೂರು ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆಯು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

10 ದಿನದ ತರಬೇತಿಯನ್ನು ಪೂರೈಸಿದ ಉಜಿರೆ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಉಭಯ ಗ್ರಾಮದ ಪಂಚಾಯತ್ ಅಧ್ಯಕ್ಷರು ಕಿಟ್ ಸರ್ಟಿಫಿಕೇಟ್ ವಿತರಿಸಿ ಶುಭ ಹಾರೈಸಿದರು. ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಶಕ್ತರಾಗಬೇಕು ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕಾರ್ಯದರ್ಶಿ ಸರೋಜ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.
ಸೃಷ್ಟಿ ಇನ್ಫೋಟೆಕ್ ಕುಂದಾಪುರ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿ ವಿನುತ ರಜತ್ ಗೌಡ ಉಜಿರೆ ಕಾರ್ಮಿಕರಿಗೆ ತರಬೇತಿ ನೀಡಿದ್ದರು. ಕಲ್ಮಂಜ ಗ್ರಾಮದ ಕಟ್ಟಡ ಕಾರ್ಮಿಕರಾದ ಐತಪ್ಪ ನಲಿಕೆ ಪೂಜಾ, ಉಜಿರೆ ಗ್ರಾಮದ ಸಂದೀಪ್ 10 ದಿನದ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.
ಸಂಪನ್ಮೂಲ ವ್ಯಕ್ತಿ ಸ್ವಾಗತಿಸಿ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದಿಸಿದರು.











