22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೌಶಲ್ಯ ಭಾರತ್ ಯೋಜನೆ, ಕರ್ನಾಟಕ ರಾಜ್ಯ ಸರಕಾರದ ಅನುಷ್ಠಾನದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಬೆಂಗಳೂರು ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆಯು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

10 ದಿನದ ತರಬೇತಿಯನ್ನು ಪೂರೈಸಿದ ಉಜಿರೆ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಉಭಯ ಗ್ರಾಮದ ಪಂಚಾಯತ್ ಅಧ್ಯಕ್ಷರು ಕಿಟ್ ಸರ್ಟಿಫಿಕೇಟ್ ವಿತರಿಸಿ ಶುಭ ಹಾರೈಸಿದರು. ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಶಕ್ತರಾಗಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕಾರ್ಯದರ್ಶಿ ಸರೋಜ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.
ಸೃಷ್ಟಿ ಇನ್ಫೋಟೆಕ್ ಕುಂದಾಪುರ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿ ವಿನುತ ರಜತ್ ಗೌಡ ಉಜಿರೆ ಕಾರ್ಮಿಕರಿಗೆ ತರಬೇತಿ ನೀಡಿದ್ದರು. ಕಲ್ಮಂಜ ಗ್ರಾಮದ ಕಟ್ಟಡ ಕಾರ್ಮಿಕರಾದ ಐತಪ್ಪ ನಲಿಕೆ ಪೂಜಾ, ಉಜಿರೆ ಗ್ರಾಮದ ಸಂದೀಪ್ 10 ದಿನದ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.
ಸಂಪನ್ಮೂಲ ವ್ಯಕ್ತಿ ಸ್ವಾಗತಿಸಿ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದಿಸಿದರು.

Related posts

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya
error: Content is protected !!