September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಕಳೆಂಜದಲ್ಲಿ ಅಣಬೆ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ತರಬೇತಿ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!