25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ ಅತಿಥಿಗಳಾಗಿ ಭಾಗವಹಿಸಿ ಇಲಾಖಾ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಪ್ರತಿನಿಧಿ ಶ್ರೀಮತಿ ಆನಂದಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ.ಪಿ ಉಪಸ್ಥಿತರಿದ್ದರು.
ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮದ್ದಡ್ಕ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ನಸೀಮಾ ಪುನರಾಯ್ಕೆಯಾದರು.

ಸದಸ್ಯರಾಗಿ ಮಹಮ್ಮದ್ ರಫೀಕ್, ಸತೀಶ್ ದೇವಾಡಿಗ , ವೆಂಕಪ್ಪಗೌಡ, ರಾಜೇಶ್ ಆಚಾರ್ಯ, ಸುರೇಶ್ ನಾಯ್ಕ, ಶಿವಪ್ರಸಾದ್ ಆಚಾರ್ಯ ಮತ್ತು ಝರೀನಾ, ಫಾತಿಮಾ, ಫರೀದಾ, ವಸಂತಿ, ಉಷಾ , ಮುಮ್ತಾಜ್ , ಕಸ್ತೂರಿ ಪ್ರಭು , ಶೋಭಾ, ಆಶಾ ಆಯ್ಕೆಯಾದರು.
ಶಿಕ್ಷಕಿ ನಯನಾ. ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಶೌಫ ಮರಿಯಂ ರಾಜಶ್ರೀ, ಆಪ್ತಿ ಪ್ರಾರ್ಥನೆ ಗೈದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಧನ್ಯವಾದ ಕೋರಿದರು. ಸಹ ಶಿಕ್ಷಕ ವೃಂದದವರು ಮತ್ತು ಅಡಿಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!