37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನ ಮಂದಿರದ ಸಭಾಂಗಣದಲ್ಲಿ ಜ. 18ರಂದು ನಡೆಯಿತು.

ತುಂಬೆದಲೆಕ್ಕಿ ಭಜನ ಮಂದಿರದ ಗೌರವ ಸಲಹೆಗಾರರಾಗಿರುವ ಲಕ್ಷ್ಮೀನಾರಾಯಣ ಆಚಾರ್ಯ ಸಂಗಬೆಟ್ಟು ಅವರು ನುಡಿನಮನಗೈದು, ಮಂಜಪ್ಪ ದೇವಾಡಿಗರ ಗುಣಗಾನ ಮಾಡಿದರು. ಪ್ರಾಧ್ಯಾಪಕ ಗುಣಪ್ರಸಾದ್ ಕಾರಂದೂರು ಶ್ರದ್ಧಾಂಜಲಿ ಅರ್ಪಿಸಿ, ಸೌಮ್ಯ ಸ್ವಭಾವದ ಮಂಜಪ್ಪ ದೇವಾಡಿಗರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಭಜನೆಯನ್ನೇ ಜೀವನವನ್ನಾಗಿಸಿದ ಅವರು ಮಕ್ಕಳಿಗೆ ಸ್ಪೂರ್ತಿದಾಯಕರಾಗಿದ್ದರು, ಅವರ ನಿಧನ ತುಂಬೆದಲೆಕ್ಕಿ ಭಜನ ಮಂಡಳಿಗೆ ತುಂಬಲಾಗದ ನಷ್ಟ ಎಂದರು.

ವೇಣೂರಿನ ಉದ್ಯಮಿ ಹಿರಿಯರಾದ ಕೆ. ಭಾಸ್ಕರ ಪೈ, ಕೆ. ವಿಜಯ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುಗಳಾದ ಶಾಲಿನಿ, ವೀಣಾ, ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಲಿಂಗಪ್ಪ ದೇವಾಡಿಗ ಗೋಳಿದಡ್ಕ ಸೇರಿದಂತೆ ಮಂಜಪ್ಪ ದೇವಾಡಿಗರ ಕುಟುಂಬಿಕರು, ಹಿತೈಷಿಗಳು, ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕರ ಪರವಾಗಿ ಜಯಂಶಕರ ಹೆಗ್ಡೆ ಅವರು ಗುಣಗಾನಗೈದರು. ಹರೀಶ್ ಕುಮಾರ್ ಪೊಕ್ಕಿ ಪ್ರಸ್ತಾವಣೆಗೈದು, ಸಭೆಯನ್ನು ನಿರ್ವಹಿಸಿದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya
error: Content is protected !!