25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನ ಮಂದಿರದ ಸಭಾಂಗಣದಲ್ಲಿ ಜ. 18ರಂದು ನಡೆಯಿತು.

ತುಂಬೆದಲೆಕ್ಕಿ ಭಜನ ಮಂದಿರದ ಗೌರವ ಸಲಹೆಗಾರರಾಗಿರುವ ಲಕ್ಷ್ಮೀನಾರಾಯಣ ಆಚಾರ್ಯ ಸಂಗಬೆಟ್ಟು ಅವರು ನುಡಿನಮನಗೈದು, ಮಂಜಪ್ಪ ದೇವಾಡಿಗರ ಗುಣಗಾನ ಮಾಡಿದರು. ಪ್ರಾಧ್ಯಾಪಕ ಗುಣಪ್ರಸಾದ್ ಕಾರಂದೂರು ಶ್ರದ್ಧಾಂಜಲಿ ಅರ್ಪಿಸಿ, ಸೌಮ್ಯ ಸ್ವಭಾವದ ಮಂಜಪ್ಪ ದೇವಾಡಿಗರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಭಜನೆಯನ್ನೇ ಜೀವನವನ್ನಾಗಿಸಿದ ಅವರು ಮಕ್ಕಳಿಗೆ ಸ್ಪೂರ್ತಿದಾಯಕರಾಗಿದ್ದರು, ಅವರ ನಿಧನ ತುಂಬೆದಲೆಕ್ಕಿ ಭಜನ ಮಂಡಳಿಗೆ ತುಂಬಲಾಗದ ನಷ್ಟ ಎಂದರು.

ವೇಣೂರಿನ ಉದ್ಯಮಿ ಹಿರಿಯರಾದ ಕೆ. ಭಾಸ್ಕರ ಪೈ, ಕೆ. ವಿಜಯ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುಗಳಾದ ಶಾಲಿನಿ, ವೀಣಾ, ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಲಿಂಗಪ್ಪ ದೇವಾಡಿಗ ಗೋಳಿದಡ್ಕ ಸೇರಿದಂತೆ ಮಂಜಪ್ಪ ದೇವಾಡಿಗರ ಕುಟುಂಬಿಕರು, ಹಿತೈಷಿಗಳು, ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕರ ಪರವಾಗಿ ಜಯಂಶಕರ ಹೆಗ್ಡೆ ಅವರು ಗುಣಗಾನಗೈದರು. ಹರೀಶ್ ಕುಮಾರ್ ಪೊಕ್ಕಿ ಪ್ರಸ್ತಾವಣೆಗೈದು, ಸಭೆಯನ್ನು ನಿರ್ವಹಿಸಿದರು.

Related posts

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya
error: Content is protected !!