ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನ ಮಂದಿರದ ಸಭಾಂಗಣದಲ್ಲಿ ಜ. 18ರಂದು ನಡೆಯಿತು.

ತುಂಬೆದಲೆಕ್ಕಿ ಭಜನ ಮಂದಿರದ ಗೌರವ ಸಲಹೆಗಾರರಾಗಿರುವ ಲಕ್ಷ್ಮೀನಾರಾಯಣ ಆಚಾರ್ಯ ಸಂಗಬೆಟ್ಟು ಅವರು ನುಡಿನಮನಗೈದು, ಮಂಜಪ್ಪ ದೇವಾಡಿಗರ ಗುಣಗಾನ ಮಾಡಿದರು. ಪ್ರಾಧ್ಯಾಪಕ ಗುಣಪ್ರಸಾದ್ ಕಾರಂದೂರು ಶ್ರದ್ಧಾಂಜಲಿ ಅರ್ಪಿಸಿ, ಸೌಮ್ಯ ಸ್ವಭಾವದ ಮಂಜಪ್ಪ ದೇವಾಡಿಗರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಭಜನೆಯನ್ನೇ ಜೀವನವನ್ನಾಗಿಸಿದ ಅವರು ಮಕ್ಕಳಿಗೆ ಸ್ಪೂರ್ತಿದಾಯಕರಾಗಿದ್ದರು, ಅವರ ನಿಧನ ತುಂಬೆದಲೆಕ್ಕಿ ಭಜನ ಮಂಡಳಿಗೆ ತುಂಬಲಾಗದ ನಷ್ಟ ಎಂದರು.

ವೇಣೂರಿನ ಉದ್ಯಮಿ ಹಿರಿಯರಾದ ಕೆ. ಭಾಸ್ಕರ ಪೈ, ಕೆ. ವಿಜಯ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುಗಳಾದ ಶಾಲಿನಿ, ವೀಣಾ, ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಲಿಂಗಪ್ಪ ದೇವಾಡಿಗ ಗೋಳಿದಡ್ಕ ಸೇರಿದಂತೆ ಮಂಜಪ್ಪ ದೇವಾಡಿಗರ ಕುಟುಂಬಿಕರು, ಹಿತೈಷಿಗಳು, ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕರ ಪರವಾಗಿ ಜಯಂಶಕರ ಹೆಗ್ಡೆ ಅವರು ಗುಣಗಾನಗೈದರು. ಹರೀಶ್ ಕುಮಾರ್ ಪೊಕ್ಕಿ ಪ್ರಸ್ತಾವಣೆಗೈದು, ಸಭೆಯನ್ನು ನಿರ್ವಹಿಸಿದರು.

Related posts

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
error: Content is protected !!