25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು. ಶ್ರವಣ ದೋಷವುಳ್ಳ ಮಕ್ಕಳ ಶ್ರವಣ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅಗತ್ಯವಾದ ಶ್ರವಣ ಸಾಧನ ಪ್ರೋಗ್ರಾಮಿಂಗ್ ಹಾಗೂ ಫಿಟ್ಟಿಂಗ್ ಗಳನ್ನು ಒದಗಿಸುವುದು ಹಾಗೂ ಶ್ರವಣದೋಷವಿರುವ ಮಕ್ಕಳನ್ನು ಮುಂಚಿತವಾಗಿ ಗುರುತಿಸಿ ಸೂಕ್ತ ಹಸ್ತಕ್ಷೇಪದ ಮೂಲಕ ಮಕ್ಕಳ ಸಮಸ್ಯೆಯನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಒಟ್ಟು 05 ಮಕ್ಕಳಿಗೆ ಶ್ರವಣ ಮೌಲ್ಯಮಾಪನವನ್ನು ನಡೆಸಿ, ಶ್ರವಣ ದೋಷವಿರುವ 03 ವಿಶೇಷ ಚೇತನ ಮಕ್ಕಳಿಗೆ ದಾನಿಯೊಬ್ಬರಿಂದ ನೀಡಲ್ಪಟ್ಟ ಶ್ರವಣ ಸಾಧನಗಳನ್ನು ಅಳವಡಿಸಲಾಯಿತು.
ಶಾಲಾ ಶ್ರವಣಶಾಸ್ತ್ರಜ್ಞ ಮತ್ತು ಸ್ಪೀಚ್ ಥೆರಪಿಸ್ಟ್ ರಕ್ಷಾ ಅರುಣ್ ಪೂಜಾರಿ ಹಾಗೂ ಎಮ್.ವಿ.ಶೆಟ್ಟಿ ಕಾಲೇಜು ಮಂಗಳೂರು ಇಲ್ಲಿನ ಮೂವರು ಇಂಟರ್ನ್ಸ್ಗಳಾದ ಕಾವೇರಿ ಮತ್ತು ಶಿರ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya
error: Content is protected !!