September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು. ಶ್ರವಣ ದೋಷವುಳ್ಳ ಮಕ್ಕಳ ಶ್ರವಣ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅಗತ್ಯವಾದ ಶ್ರವಣ ಸಾಧನ ಪ್ರೋಗ್ರಾಮಿಂಗ್ ಹಾಗೂ ಫಿಟ್ಟಿಂಗ್ ಗಳನ್ನು ಒದಗಿಸುವುದು ಹಾಗೂ ಶ್ರವಣದೋಷವಿರುವ ಮಕ್ಕಳನ್ನು ಮುಂಚಿತವಾಗಿ ಗುರುತಿಸಿ ಸೂಕ್ತ ಹಸ್ತಕ್ಷೇಪದ ಮೂಲಕ ಮಕ್ಕಳ ಸಮಸ್ಯೆಯನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಒಟ್ಟು 05 ಮಕ್ಕಳಿಗೆ ಶ್ರವಣ ಮೌಲ್ಯಮಾಪನವನ್ನು ನಡೆಸಿ, ಶ್ರವಣ ದೋಷವಿರುವ 03 ವಿಶೇಷ ಚೇತನ ಮಕ್ಕಳಿಗೆ ದಾನಿಯೊಬ್ಬರಿಂದ ನೀಡಲ್ಪಟ್ಟ ಶ್ರವಣ ಸಾಧನಗಳನ್ನು ಅಳವಡಿಸಲಾಯಿತು.
ಶಾಲಾ ಶ್ರವಣಶಾಸ್ತ್ರಜ್ಞ ಮತ್ತು ಸ್ಪೀಚ್ ಥೆರಪಿಸ್ಟ್ ರಕ್ಷಾ ಅರುಣ್ ಪೂಜಾರಿ ಹಾಗೂ ಎಮ್.ವಿ.ಶೆಟ್ಟಿ ಕಾಲೇಜು ಮಂಗಳೂರು ಇಲ್ಲಿನ ಮೂವರು ಇಂಟರ್ನ್ಸ್ಗಳಾದ ಕಾವೇರಿ ಮತ್ತು ಶಿರ್ಲಿ ಉಪಸ್ಥಿತರಿದ್ದರು.

Related posts

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya
error: Content is protected !!