22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಮಿ ವಿವೇಕಾನಂದರು ನಡೆದು ಬಂದ ಹಾದಿ ಮತ್ತು ಮಾಡಿದಂತಹ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಮುಖ್ಯ ಅತಿಥಿಯಾಗಿ ಬೋಲ್ಮಾನರ್ ಓಂ ಶಕ್ತಿ ಭಜನಾ ಮಂಡಳಿಯ ಗೌರವಾಧ್ಯಕ್ಷ ದಾಮೋದರ ಗೌಡ ಇವರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಭಾಷಣವನ್ನು ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಶಿಕ್ಷಕ ಗೌರೀಶ್ ಸ್ವಾಗತಿಸಿ, ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!