23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡ ಇವರು ಆಯೋಜಿಸಿದ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ , ರೋವರ್ ರೇಂಜರ್ಸ್ ಕ್ಯಾಂಪೋರಿ ಉತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್, ರೋವರ್ ರೇಂಜಸ್ ಭಾಗವಹಿಸಿ, ಸ್ಥಳೀಯ ಸಂಸ್ಥೆವಾರು ನಡೆಸಿದಂತಹ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗಳನ್ನು ಪಡೆದು ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡರು.

ಸ್ಥಳೀಯ ಸಂಸ್ಥೆಗೆ ನೀಡಿದ ಕೋಟಾದನ್ವಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಸಾರಥ್ಯದಲ್ಲಿ, ಅಮಿತಾನಂದ ಹೆಗ್ಡೆ, ತ್ರಿಶಾಲ ರವರ ಮಾರ್ಗದರ್ಶನದಲ್ಲಿ ಸುಮಲತಾ, ಕಾದಂಬರಿ, ಅಮೃತ ವಿ ಶೆಟ್ಟಿ, ಪ್ರಮೀಳಾ ಎನ್, ಸೇವಂತಿ, ಸುವೀನಾ, ವಿನ್ಸೆಂಟ್ ಸಿಕ್ವೇರಾ, ಉಮಾ, ಪ್ರಸಾದ್, ಕೃಷ್ಣ ಕಿರಣ್, ಮಮತಾ, ಭವ್ಯ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆ ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಸರಕಾರಿ ಪ್ರೌಢಶಾಲೆ ಬಂಗಾಡಿ, ಸೈಂಟ್ ತೆರೇಸಾ ಬೆಳ್ತಂಗಡಿ, ಪದವಿಪೂರ್ವ ಕಾಲೇಜು ಮುಂಡಾಜೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯ ವಿದ್ಯಾರ್ಥಿಗಳು ಜಿಲ್ಲಾ ಕ್ಯಾಂಪೂರಿಯಲ್ಲಿ ಭಾಗವಹಿಸಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya
error: Content is protected !!