ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಶಾಸಕರು ವಿಶೇಷವಾಗಿ ಶ್ರಮವಹಿಸಿದರು .
ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75ಲಕ್ಷವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ. ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.











