22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಶಾಸಕರು ವಿಶೇಷವಾಗಿ ಶ್ರಮವಹಿಸಿದರು .

ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75ಲಕ್ಷವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ. ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Related posts

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya
error: Content is protected !!