23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಶಾಸಕರು ವಿಶೇಷವಾಗಿ ಶ್ರಮವಹಿಸಿದರು .

ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75ಲಕ್ಷವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ. ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!