25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಜ.20ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ ಪ್ರಮುಖರು ನಾಳ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್ ಮತ್ತು ಮನೆಯವರಿಗೆ ಸಾಂತ್ವನ ಹೇಳಿ, ಯಾವುದೇ ಸಮಯದಲ್ಲೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ಅಲ್ಲದೆ ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಸುಮಂತ್ ನ ಅಸಹಜ ಸಾವು ಕುರಿತು ಸಮಗ್ರ ತನಿಖೆ ನಡೆಸಿ, ನ್ಯಾಯ ದೊರಕುವಂತೆ ಒತ್ತಾಯಿಸಿದ್ದೇವೆ ಎಂದು ಭೇಟಿ ನೀಡಿದ ಸಂದರ್ಭ ಪ್ರಮುಖರು ತಿಳಿಸಿದರು.

ಈ ಸಂದರ್ಭದಲ್ಲಿ ವಿಹಿಪಂ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಹಿಂಪ ಜಿಲ್ಲಾ ಸಹಸಂಯೋಜಕ್
ದಿನೇಶ್ ಚಾರ್ಮಾಡಿ, ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಹ ಕಾರ್ಯದರ್ಶಿ ಸತೀಶ್ ಮರಕಡ, ಬಜರಂಗದಳ ಸಂಯೋಜಕ ಪ್ರಭಾಕರ ಮುದಲಡ್ಕ, ಸಹ ಸಂಯೋಜಕ
ಮೋಹನ್ ಕಂಚೇಲು ನಡ, ಪ್ರಮುಖರಾದ ಗಣೇಶ್ ರಾವ್ ಗೇರುಕಟ್ಟೆ, ಪುರಂದರ ಗೇರುಕಟ್ಟೆ, ಯೋಗೀಶ್ ಅಡ್ಡಕೊಡಂಗೆ, ಭುವನೇಶ್ ಗೇರುಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya
error: Content is protected !!