25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, “ಇಂದಿನ ಜೀವನದಲ್ಲಿ ಈ ಮೂರು ತರಬೇತಿ ವಿಷಯಗಳು ಅತ್ಯಂತ ಅವಶ್ಯಕವಾಗಿವೆ. ಕಲಿತ ವೃತ್ತಿಯನ್ನು ಆತ್ಮವಿಶ್ವಾಸದಿಂದ ಸ್ವ ಉದ್ಯೋಗವಾಗಿ ಕೈಗೊಂಡು, ಸ್ವಾವಲಂಬಿ ಜೀವನ ನಡೆಸಬೇಕು. ಶ್ರಮ ಮತ್ತು ಶಿಸ್ತಿನಿಂದ ತೊಡಗಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ವಿರೂಪಾಕ್ಷ ಮತ್ತು ದೇವರಾಜ್, ಹಾಗೂ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ರುಡ್ ಸೆಟ್ ಸಂಸ್ಥೆಯಲ್ಲಿ ಪಡೆದ ಕೌಶಲ್ಯಾಧಾರಿತ ತರಬೇತಿ, ಮಾರ್ಗದರ್ಶನ ಹಾಗೂ ಸ್ವ ಉದ್ಯೋಗದತ್ತ ಪಡೆದ ಪ್ರೇರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Related posts

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya
error: Content is protected !!