July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, “ಇಂದಿನ ಜೀವನದಲ್ಲಿ ಈ ಮೂರು ತರಬೇತಿ ವಿಷಯಗಳು ಅತ್ಯಂತ ಅವಶ್ಯಕವಾಗಿವೆ. ಕಲಿತ ವೃತ್ತಿಯನ್ನು ಆತ್ಮವಿಶ್ವಾಸದಿಂದ ಸ್ವ ಉದ್ಯೋಗವಾಗಿ ಕೈಗೊಂಡು, ಸ್ವಾವಲಂಬಿ ಜೀವನ ನಡೆಸಬೇಕು. ಶ್ರಮ ಮತ್ತು ಶಿಸ್ತಿನಿಂದ ತೊಡಗಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ವಿರೂಪಾಕ್ಷ ಮತ್ತು ದೇವರಾಜ್, ಹಾಗೂ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ರುಡ್ ಸೆಟ್ ಸಂಸ್ಥೆಯಲ್ಲಿ ಪಡೆದ ಕೌಶಲ್ಯಾಧಾರಿತ ತರಬೇತಿ, ಮಾರ್ಗದರ್ಶನ ಹಾಗೂ ಸ್ವ ಉದ್ಯೋಗದತ್ತ ಪಡೆದ ಪ್ರೇರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya
error: Content is protected !!