23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೌಶಲ್ಯ ಭಾರತ್ ಯೋಜನೆ, ಕರ್ನಾಟಕ ರಾಜ್ಯ ಸರಕಾರದ ಅನುಷ್ಠಾನದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಬೆಂಗಳೂರು ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆಯು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

10 ದಿನದ ತರಬೇತಿಯನ್ನು ಪೂರೈಸಿದ ಉಜಿರೆ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಉಭಯ ಗ್ರಾಮದ ಪಂಚಾಯತ್ ಅಧ್ಯಕ್ಷರು ಕಿಟ್ ಸರ್ಟಿಫಿಕೇಟ್ ವಿತರಿಸಿ ಶುಭ ಹಾರೈಸಿದರು. ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಶಕ್ತರಾಗಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕಾರ್ಯದರ್ಶಿ ಸರೋಜ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.
ಸೃಷ್ಟಿ ಇನ್ಫೋಟೆಕ್ ಕುಂದಾಪುರ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿ ವಿನುತ ರಜತ್ ಗೌಡ ಉಜಿರೆ ಕಾರ್ಮಿಕರಿಗೆ ತರಬೇತಿ ನೀಡಿದ್ದರು. ಕಲ್ಮಂಜ ಗ್ರಾಮದ ಕಟ್ಟಡ ಕಾರ್ಮಿಕರಾದ ಐತಪ್ಪ ನಲಿಕೆ ಪೂಜಾ, ಉಜಿರೆ ಗ್ರಾಮದ ಸಂದೀಪ್ 10 ದಿನದ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.
ಸಂಪನ್ಮೂಲ ವ್ಯಕ್ತಿ ಸ್ವಾಗತಿಸಿ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!