ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್ಕೃಷ್ಣ ಪಡ್ವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇಲ್ಲಿ ಸಾನಿಧ್ಯದ ವಿಶೇಷಚೇತನ ಮಕ್ಕಳೇ ತಯಾರಿಸಿ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ಪ್ರೇಮ್ರಾಜ್ ರೋಶನ್ ಸ್ವಿಕ್ವೇರಾ, ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು.











