32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ‌ ಆಚರಣೆ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಯ ಹರಿಕಾರ: ಶಾಸಕ ಹರೀಶ್ ಪೂಂಜ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!