22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!