September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡನ್ನು ಕಡ್ಡಾಯಗೊಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾ‌ರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು.

ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಟೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!