July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ ಅತಿಥಿಗಳಾಗಿ ಭಾಗವಹಿಸಿ ಇಲಾಖಾ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಪ್ರತಿನಿಧಿ ಶ್ರೀಮತಿ ಆನಂದಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ.ಪಿ ಉಪಸ್ಥಿತರಿದ್ದರು.
ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮದ್ದಡ್ಕ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ನಸೀಮಾ ಪುನರಾಯ್ಕೆಯಾದರು.

ಸದಸ್ಯರಾಗಿ ಮಹಮ್ಮದ್ ರಫೀಕ್, ಸತೀಶ್ ದೇವಾಡಿಗ , ವೆಂಕಪ್ಪಗೌಡ, ರಾಜೇಶ್ ಆಚಾರ್ಯ, ಸುರೇಶ್ ನಾಯ್ಕ, ಶಿವಪ್ರಸಾದ್ ಆಚಾರ್ಯ ಮತ್ತು ಝರೀನಾ, ಫಾತಿಮಾ, ಫರೀದಾ, ವಸಂತಿ, ಉಷಾ , ಮುಮ್ತಾಜ್ , ಕಸ್ತೂರಿ ಪ್ರಭು , ಶೋಭಾ, ಆಶಾ ಆಯ್ಕೆಯಾದರು.
ಶಿಕ್ಷಕಿ ನಯನಾ. ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಶೌಫ ಮರಿಯಂ ರಾಜಶ್ರೀ, ಆಪ್ತಿ ಪ್ರಾರ್ಥನೆ ಗೈದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಧನ್ಯವಾದ ಕೋರಿದರು. ಸಹ ಶಿಕ್ಷಕ ವೃಂದದವರು ಮತ್ತು ಅಡಿಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya
error: Content is protected !!