ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಬೆಂಗಳೂರು ಇದರ ಮಂಗಳೂರು ವಿಭಾಗದ ವತಿಯಿಂದ ಪುತ್ತೂರಿನಲ್ಲಿ ಜ.19ರಂದು 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ 2026ರ ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಅರಣ್ಯ ಸಂರಕ್ಷಣಾಧಿಕಾರಿ ಡಾ। ಕರಿಕಲನ್ ವಿ.,ಗ.ಅ.ಪಾ ಮತ್ತು ಅ.ವೀ. ಸಂಘ ಮಂಗಳೂರು ವಿಭಾಗದ ಅಧ್ಯಕ್ಷ ಜಿತೇಶ್ ಪಿ., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಎಸ್. ಮರಿಯಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಬ್ಬಯ್ಯ, ಶಶಿಕಾಂತ್ ಎಸ್. ವಿಭೂತೆ, ಪ್ರಶಾಂತ್ ಕುಮಾರ್ ಪೈ, ವಲಯ ಅರಣ್ಯಾಧಿಕಾರಿ ಬಿ.ಎಮ್. ಕಿರಣ್, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ರಾಜ್ಯಾಧ್ಯಕ್ಷ ಆನಂದ ವಿ., ತಾಲೂಕು ಸರ್ಕಾರಿ ನೌಕರರ ಸಂಘ ದ ಅಧ್ಯಕ್ಷ ಶಿವಾನಂದ ಆಚಾರ್ಯ, ಈಶ್ವರ ಭಟ್ ಪಂಜಿಗುಡ್ಡೆ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕ ಮತ್ತು ಅರಣ್ಯ ವೀಕ್ಷಕ ಸಂಘದ ಗೌರವಾಧ್ಯಕ್ಷ ಜಗದೀಶ್ ಕೆ.ಎನ್., ಚಿದಾನಂದ್ ಜಿ. ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.











