25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನ ಮಂದಿರದ ಸಭಾಂಗಣದಲ್ಲಿ ಜ. 18ರಂದು ನಡೆಯಿತು.

ತುಂಬೆದಲೆಕ್ಕಿ ಭಜನ ಮಂದಿರದ ಗೌರವ ಸಲಹೆಗಾರರಾಗಿರುವ ಲಕ್ಷ್ಮೀನಾರಾಯಣ ಆಚಾರ್ಯ ಸಂಗಬೆಟ್ಟು ಅವರು ನುಡಿನಮನಗೈದು, ಮಂಜಪ್ಪ ದೇವಾಡಿಗರ ಗುಣಗಾನ ಮಾಡಿದರು. ಪ್ರಾಧ್ಯಾಪಕ ಗುಣಪ್ರಸಾದ್ ಕಾರಂದೂರು ಶ್ರದ್ಧಾಂಜಲಿ ಅರ್ಪಿಸಿ, ಸೌಮ್ಯ ಸ್ವಭಾವದ ಮಂಜಪ್ಪ ದೇವಾಡಿಗರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಭಜನೆಯನ್ನೇ ಜೀವನವನ್ನಾಗಿಸಿದ ಅವರು ಮಕ್ಕಳಿಗೆ ಸ್ಪೂರ್ತಿದಾಯಕರಾಗಿದ್ದರು, ಅವರ ನಿಧನ ತುಂಬೆದಲೆಕ್ಕಿ ಭಜನ ಮಂಡಳಿಗೆ ತುಂಬಲಾಗದ ನಷ್ಟ ಎಂದರು.

ವೇಣೂರಿನ ಉದ್ಯಮಿ ಹಿರಿಯರಾದ ಕೆ. ಭಾಸ್ಕರ ಪೈ, ಕೆ. ವಿಜಯ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುಗಳಾದ ಶಾಲಿನಿ, ವೀಣಾ, ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಲಿಂಗಪ್ಪ ದೇವಾಡಿಗ ಗೋಳಿದಡ್ಕ ಸೇರಿದಂತೆ ಮಂಜಪ್ಪ ದೇವಾಡಿಗರ ಕುಟುಂಬಿಕರು, ಹಿತೈಷಿಗಳು, ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕರ ಪರವಾಗಿ ಜಯಂಶಕರ ಹೆಗ್ಡೆ ಅವರು ಗುಣಗಾನಗೈದರು. ಹರೀಶ್ ಕುಮಾರ್ ಪೊಕ್ಕಿ ಪ್ರಸ್ತಾವಣೆಗೈದು, ಸಭೆಯನ್ನು ನಿರ್ವಹಿಸಿದರು.

Related posts

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!