23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು ಕುರಿತು ಸಮಗ್ರ ತನಿಖೆ ನಡೆಸಿ, ನ್ಯಾಯ ದೊರಕುವಂತೆ ಜ.20ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದ ಪ್ರದಾನ ಅರ್ಚಕ ವೇ.ಮೂ.‌ರಾಘವೇಂದ್ರ ಅಸ್ರಣ್ಣ ಅವರ ಉಪಸ್ಥಿತಿಯಲ್ಲಿ 108 ಬಾರಿ ಶ್ರೀ ದುರ್ಗಾದೇವಿ ನಾಮ ಜಪ ಮಾಡಿ, ಅಪರಾಧಿಗಳು ಬೇಗ ಪತ್ತೆಯಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ , ವಿಹಿಪಂ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಜ. 14ರ ಮಕರ ಸಂಕ್ರಾತಿಯ ದಿನ ಬೆಳಗ್ಗೆ ಧನು ಪೂಜೆಗೆಂದು ಹೊರಟಿದ್ದ ಸಂದರ್ಭದಲ್ಲಿ ಮನೆಯಿಂದ ಕೂಗಳತೆಯ ದೂರದ ಕೆರೆಯಲ್ಲಿ ಅನುಮಾನಸ್ಪದವಾಗಿ ಶವ ಸಿಕ್ಕಿರುತ್ತದೆ.

ಈಗಾಗಲೇ ದ.ಕ. ಜಿಲ್ಲೆ ವರಿಷ್ಠಾಧಿಕಾರಿ ದಕ್ಷ ಅಧಿಕಾರಿ ಅರುಣ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆ ಹಾಗೂ ತಾಲೂಕಿನ ದಕ್ಷ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಅಮಾಯಕ ಬಾಲಕನ ಅಸಹಜ ಸಾವಿನಿಂದ ಮನೆಯವರು ಹಾಗೂ ಊರವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಪ್ರಕರಣಕ್ಕೆ ಅಂತ್ಯ ಹಾಡಿ ಮನೆಯವರಿಗೆ ನ್ಯಾಯ ಸಿಗುವಂತೆ ಆಗ್ರಹಿಸಿದರು.

ವಿಹಿಂಪ ಜಿಲ್ಲಾ ಸಹಸಂಯೋಜಕ ದಿನೇಶ್ ಚಾರ್ಮಾಡಿ, ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಹ ಕಾರ್ಯದರ್ಶಿ ಸತೀಶ್ ಮರಕಡ, ಬಜರಂಗದಳ ಸಂಯೋಜಕ
ಪ್ರಭಾಕರ ಮುದಲಡ್ಕ, ಸಹ ಸಂಯೋಜಕ ಮೋಹನ್ ಕಂಚೇಲು ನಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಚಂದ್ರಕಾಂತ್ ನಿಡ್ಡಾಜೆ, ರಾಜೇಶ್ ಪೆಂರ್ಬುಡ, ದಯರಾಜ್ ಹೀರ್ಯ, ಕರುಣಾಕರ ಕೊರಂಜ, ಸದಾನಂದ ಶೆಟ್ಟಿ, ಗಣೇಶ್ ನಾಳ, ರಂಜನ್ ಮುದ್ದುಂಜ, ಗಣೇಶ್ ರಾವ್ ಗೇರುಕಟ್ಟೆ, ಪುರಂದರ ಗೇರುಕಟ್ಟೆ, ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಮನೀಶ್ ಮಚ್ಚಿನ, ಸುಕೇಶ್, ದಾಮೋದರ್, ಗಿರೀಶ್ ಗೇರುಕಟ್ಟೆ, ಭುವನೇಶ್ ಗೇರುಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!