25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು. ಶ್ರವಣ ದೋಷವುಳ್ಳ ಮಕ್ಕಳ ಶ್ರವಣ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅಗತ್ಯವಾದ ಶ್ರವಣ ಸಾಧನ ಪ್ರೋಗ್ರಾಮಿಂಗ್ ಹಾಗೂ ಫಿಟ್ಟಿಂಗ್ ಗಳನ್ನು ಒದಗಿಸುವುದು ಹಾಗೂ ಶ್ರವಣದೋಷವಿರುವ ಮಕ್ಕಳನ್ನು ಮುಂಚಿತವಾಗಿ ಗುರುತಿಸಿ ಸೂಕ್ತ ಹಸ್ತಕ್ಷೇಪದ ಮೂಲಕ ಮಕ್ಕಳ ಸಮಸ್ಯೆಯನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಒಟ್ಟು 05 ಮಕ್ಕಳಿಗೆ ಶ್ರವಣ ಮೌಲ್ಯಮಾಪನವನ್ನು ನಡೆಸಿ, ಶ್ರವಣ ದೋಷವಿರುವ 03 ವಿಶೇಷ ಚೇತನ ಮಕ್ಕಳಿಗೆ ದಾನಿಯೊಬ್ಬರಿಂದ ನೀಡಲ್ಪಟ್ಟ ಶ್ರವಣ ಸಾಧನಗಳನ್ನು ಅಳವಡಿಸಲಾಯಿತು.
ಶಾಲಾ ಶ್ರವಣಶಾಸ್ತ್ರಜ್ಞ ಮತ್ತು ಸ್ಪೀಚ್ ಥೆರಪಿಸ್ಟ್ ರಕ್ಷಾ ಅರುಣ್ ಪೂಜಾರಿ ಹಾಗೂ ಎಮ್.ವಿ.ಶೆಟ್ಟಿ ಕಾಲೇಜು ಮಂಗಳೂರು ಇಲ್ಲಿನ ಮೂವರು ಇಂಟರ್ನ್ಸ್ಗಳಾದ ಕಾವೇರಿ ಮತ್ತು ಶಿರ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!