July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

ನೆರಿಯ : ಇಲ್ಲಿಯ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು , ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ ಅವರು ನೆರಿಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ , ಕರ್ನಾಟಕ ಸರ್ಕಾರದ ಭೂ ನ್ಯಾಯ ಮಂಡಳಿ ಮಾಜಿ ಸದಸ್ಯರಾಗಿ , ಮಲೆಕುಡಿಯ ಸಮುದಾಯದ ಹಿರಿಯ ಸದಸ್ಯರಾಗಿ , ಕೊಯ್ಯುರು ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಕಲ್ಯಾಣಿ , ಪುತ್ರರಾದ ಲೀಲಾಧರ , ರಾಘವೇಂದ್ರ , ಸೊಸೆಯಂದಿರು , ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನೀಲಯ್ಯ ಮಲೆಕುಡಿಯರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೆಸ್ಕಾಂ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಮಾಜಿ ಸಚಿವ ಗಂಗಾಧರ ಗೌಡ , ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗೇಶ್ ಗೌಡ , ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ , ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ.

Related posts

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!