38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡ ಇವರು ಆಯೋಜಿಸಿದ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ , ರೋವರ್ ರೇಂಜರ್ಸ್ ಕ್ಯಾಂಪೋರಿ ಉತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್, ರೋವರ್ ರೇಂಜಸ್ ಭಾಗವಹಿಸಿ, ಸ್ಥಳೀಯ ಸಂಸ್ಥೆವಾರು ನಡೆಸಿದಂತಹ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗಳನ್ನು ಪಡೆದು ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡರು.

ಸ್ಥಳೀಯ ಸಂಸ್ಥೆಗೆ ನೀಡಿದ ಕೋಟಾದನ್ವಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಸಾರಥ್ಯದಲ್ಲಿ, ಅಮಿತಾನಂದ ಹೆಗ್ಡೆ, ತ್ರಿಶಾಲ ರವರ ಮಾರ್ಗದರ್ಶನದಲ್ಲಿ ಸುಮಲತಾ, ಕಾದಂಬರಿ, ಅಮೃತ ವಿ ಶೆಟ್ಟಿ, ಪ್ರಮೀಳಾ ಎನ್, ಸೇವಂತಿ, ಸುವೀನಾ, ವಿನ್ಸೆಂಟ್ ಸಿಕ್ವೇರಾ, ಉಮಾ, ಪ್ರಸಾದ್, ಕೃಷ್ಣ ಕಿರಣ್, ಮಮತಾ, ಭವ್ಯ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆ ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಸರಕಾರಿ ಪ್ರೌಢಶಾಲೆ ಬಂಗಾಡಿ, ಸೈಂಟ್ ತೆರೇಸಾ ಬೆಳ್ತಂಗಡಿ, ಪದವಿಪೂರ್ವ ಕಾಲೇಜು ಮುಂಡಾಜೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯ ವಿದ್ಯಾರ್ಥಿಗಳು ಜಿಲ್ಲಾ ಕ್ಯಾಂಪೂರಿಯಲ್ಲಿ ಭಾಗವಹಿಸಿದ್ದರು.

Related posts

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!