July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಶಾಸಕರು ವಿಶೇಷವಾಗಿ ಶ್ರಮವಹಿಸಿದರು .

ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75ಲಕ್ಷವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ. ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Related posts

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!