23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಜ.20ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ ಪ್ರಮುಖರು ನಾಳ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್ ಮತ್ತು ಮನೆಯವರಿಗೆ ಸಾಂತ್ವನ ಹೇಳಿ, ಯಾವುದೇ ಸಮಯದಲ್ಲೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ಅಲ್ಲದೆ ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಸುಮಂತ್ ನ ಅಸಹಜ ಸಾವು ಕುರಿತು ಸಮಗ್ರ ತನಿಖೆ ನಡೆಸಿ, ನ್ಯಾಯ ದೊರಕುವಂತೆ ಒತ್ತಾಯಿಸಿದ್ದೇವೆ ಎಂದು ಭೇಟಿ ನೀಡಿದ ಸಂದರ್ಭ ಪ್ರಮುಖರು ತಿಳಿಸಿದರು.

ಈ ಸಂದರ್ಭದಲ್ಲಿ ವಿಹಿಪಂ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಹಿಂಪ ಜಿಲ್ಲಾ ಸಹಸಂಯೋಜಕ್
ದಿನೇಶ್ ಚಾರ್ಮಾಡಿ, ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಹ ಕಾರ್ಯದರ್ಶಿ ಸತೀಶ್ ಮರಕಡ, ಬಜರಂಗದಳ ಸಂಯೋಜಕ ಪ್ರಭಾಕರ ಮುದಲಡ್ಕ, ಸಹ ಸಂಯೋಜಕ
ಮೋಹನ್ ಕಂಚೇಲು ನಡ, ಪ್ರಮುಖರಾದ ಗಣೇಶ್ ರಾವ್ ಗೇರುಕಟ್ಟೆ, ಪುರಂದರ ಗೇರುಕಟ್ಟೆ, ಯೋಗೀಶ್ ಅಡ್ಡಕೊಡಂಗೆ, ಭುವನೇಶ್ ಗೇರುಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Related posts

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!