September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, “ಇಂದಿನ ಜೀವನದಲ್ಲಿ ಈ ಮೂರು ತರಬೇತಿ ವಿಷಯಗಳು ಅತ್ಯಂತ ಅವಶ್ಯಕವಾಗಿವೆ. ಕಲಿತ ವೃತ್ತಿಯನ್ನು ಆತ್ಮವಿಶ್ವಾಸದಿಂದ ಸ್ವ ಉದ್ಯೋಗವಾಗಿ ಕೈಗೊಂಡು, ಸ್ವಾವಲಂಬಿ ಜೀವನ ನಡೆಸಬೇಕು. ಶ್ರಮ ಮತ್ತು ಶಿಸ್ತಿನಿಂದ ತೊಡಗಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ವಿರೂಪಾಕ್ಷ ಮತ್ತು ದೇವರಾಜ್, ಹಾಗೂ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ರುಡ್ ಸೆಟ್ ಸಂಸ್ಥೆಯಲ್ಲಿ ಪಡೆದ ಕೌಶಲ್ಯಾಧಾರಿತ ತರಬೇತಿ, ಮಾರ್ಗದರ್ಶನ ಹಾಗೂ ಸ್ವ ಉದ್ಯೋಗದತ್ತ ಪಡೆದ ಪ್ರೇರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!