22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ.

ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ ಎಂದು ತಿಳಿದು ಬಂದಿದೆ. ಚರ್ಚ್‌ರೋಡ್‌ನಿಂದ ರಂಗಸ್ವಾಮಿಯವರು ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತ್ತಿರುವಾಗ ಜಿಪ್ಸಿ ಮತ್ತು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಂಗಸ್ವಾಮಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಪ್ರಮಾಣದ ಗಾಯವಾಗಿದ್ದು ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya
error: Content is protected !!